ಸಚಿನ್ ಪೈಲಟ್ ಗೆ ಉತ್ತಮ ರಾಜಕೀಯ ಭವಿಷ್ಯ ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ: ವೀರಪ್ಪ ಮೊಯ್ಲಿ

ರಾಜಸ್ತಾನ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಸಚಿನ್ ಪೈಲಟ್ ಅವರಿಗೆ ಉತ್ತಮ ರಾಜಕೀಯ ಭವಿಷ್ಯ ಇದ್ದದ್ದು ಕೇವಲ ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ

ಬೆಂಗಳೂರು: ರಾಜಸ್ತಾನ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಸಚಿನ್ ಪೈಲಟ್ ಅವರಿಗೆ ಉತ್ತಮ ರಾಜಕೀಯ ಭವಿಷ್ಯ ಇದ್ದದ್ದು ಕೇವಲ ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ ವೀರಪ್ಪಮೊಯ್ಲಿ ಸಚಿನ್ ಪೈಲಟ್ ಕಾಂಗ್ರೆಸ್ ನಿಂದ ಎಲ್ಲವನ್ನು ಪಡೆದುಕೊಂಡರು, ಕಾಂಗ್ರೆಸ್  ನಲ್ಲಿದ್ದುಕೊಂಡು ಸಾಧನೆ ಮಾಡಿದರು ಎಂದು ಅಭಿಪ್ರಾ ಪಟ್ಟಿದ್ದಾರೆ.

ಸಚಿನ್ ಪೈಲಟ್, ಸಂಸದ, ಕೇಂದ್ರ ಸಚಿವ, ಪಿಸಿಸಿ ಅಧ್ಯಕ್ಷ, ಸದ್ಯ ರಾಜಸ್ಥಾನ ಡಿಸಿಎಂ ಆಗಿದ್ದರು. ಏನೇ ಸಮಸ್ಯೆ ಇದ್ದರೂ ಪಕ್ಷದ ವೇದಿಕೆಯಲ್ಲಿ ಕುಳಿತು ಮಾತನಾಡಿ ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಸಲಹೆ ನೀಡಿದ್ದಾರೆ.

ಸಚಿನ್ ಪೈಲಟ್ ಅವರು ಇಷ್ಟು ತರಾತುರಿ ನಿರ್ಧಾರ ಕೈಗೊಳ್ಳುವ ಅವಶ್ಯಕತೆಯಿರಲಿಲ್ಲ, ಅವರಗೆ ಕಾಂಗ್ರೆಸ್ ನಲ್ಲಿ ಉತ್ತಮ ರಾಜಕೀಯ ಭವಿಷ್ಯವಿತ್ತು ಎಂದು ಹೇಳಿದ್ದಾರೆ.ಬಿಜೆಪಿ ಸೇರುವುದಿಲ್ಲ ಎಂದು ಸಚಿನ್ ಹೇಳಿದ್ದಾರೆ, ಅದೊಂದು ಉತ್ತಮ ನಿರ್ಧಾರ ಎಂದು ಮೊಯ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com