ಐವರು ಬಿಜೆಪಿ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

ನಾಮ ನಿರ್ದೆಶನಗೊಂಡ ಐವರು ವಿಧಾನ ಪರಿಷತ್ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿ ವಿಧಾನ ಪರಿಷತ್ ಸದಸ್ಯರು
ಬಿಜೆಪಿ ವಿಧಾನ ಪರಿಷತ್ ಸದಸ್ಯರು

ಬೆಂಗಳೂರು: ನಾಮ ನಿರ್ದೆಶನಗೊಂಡ ಐವರು ವಿಧಾನ ಪರಿಷತ್ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದಿಂದ ಸಿ.ಪಿ. ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ಎಚ್.ವಿಶ್ವನಾಥ್, ಸಮಾಜ ಸೇವೆ ಶಾಂತಾರಾಮ್ ಸಿದ್ದಿ, ಭಾರತಿ ಶೆಟ್ಟಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಡಾ.ತಳವಾರ್ ಸಾಬಣ್ಣ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ನೂತನ ಶಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಹೂಗುಚ್ಛ ನೀಡಿ ಅಭಿನಂದಿಸಿದರು. ಮೊದಲು ಸಿ.ಪಿ.ಯೋಗೇಶ್ವರ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎರಡನೆದಾಗಿ ಮಾಜಿ ಸಚಿವ ಎಚ್.ವಿಶ್ವನಾಥ ಅವರೂ ಸಹ ಭಗವಂತನ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು. ಭಾರತಿ ಶೆಟ್ಟಿ ಅವರು ಭಾರತ ಮಾತೆಯ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರೆ, ಶಾಂತರಾಮ್ ಸಿದ್ದಿ ಅವರು ಭಗವಾನ್ ಬಿರ್ಶಾ ಮುಂಡ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. 
ಕೊನೆಯವರಾಗಿ ತಳವಾರ್ ಸಾಬಣ್ಣ ಭಗವಂತನ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದರು. ಪ್ರಮಾಣವಚನ ಕಾರ್ಯ ಕ್ರಮದಲ್ಲಿ ಯಾವುದೇ ಸಾಮಾಜಿಕ ಅಂತರ ಇರಲಿಲ್ಲ‌. ಸಚಿವ ಸಿ.ಟಿ‌.ರವಿ ಹೊರತುಪಡಿಸಿದರೆ ಯಾರೊಬ್ಬ ಸಚಿವರೂ ಹಾಜರಿರಲಿಲ್ಲ. ಕಾರ್ಯಕ್ರಮದ ಕೊನೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಗಮಿಸಿ ನೂತನ ಸದಸ್ಯರಿಗೆ ಅಭಿನಂದಿಸಿ ತೆರಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com