ಬೆಂಗಳೂರು: ಕೊರೋನಾ ಭೀತಿ ನಡುವೆಯೂ ರಾಜ್ಯದಲ್ಲಿ ಮುಂದಿನ 2 ವಾರಗಳು ರಾಜಕೀಯ ಚಟುವಟಿಕೆಗಳು ತೀವ್ರವಾಗಲಿವೆ.
ಜೂನ್ 19 ರಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ, ರಾಜೀವ್ ಗೌಡ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ಕುಪೇಂದ್ರ ರೆಡ್ಡಿ ಅವರ ಅಧಿಕಾರ ಅವಧಿ ಜೂನ್ 25ಕ್ಕೆ ಮುಗಿಯಲಿದೆ.
ಆದರೆ ಇನ್ನೂ ಯಾವ ಪಕ್ಷವೂ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ, ನಾಲ್ಕರಲ್ಲಿ 2 ಸೀಟು ಸುಲಭವಾಗಿ ಗೆಲ್ಲಬಹುದಾಗಿದೆ, ಆದರೆ ಮೂರನೇ ಅಭ್ಯರ್ಥಿಗೆ ಯಾವ ಪಕ್ಷ ಬೆಂಬಲ ನೀಡಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ,
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ಮುಖಂಡ ಎಚ್ ಡಿ ದೇವೇಗೌಡರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ಜೆಡಿಎಸ್ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ.
Advertisement