ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ

ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ, ದೇವೇಗೌಡ
ಎಚ್ ಡಿ ಕುಮಾರಸ್ವಾಮಿ, ದೇವೇಗೌಡ

ಬೆಂಗಳೂರು: ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾಳೆ ದೇವೇಗೌಡರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com