'ನನ್ನ ಸರ್ಕಾರ ಕೆಡವಿದ ಹಾಗೆ ಯಡಿಯೂರಪ್ಪ ಸರ್ಕಾರ ಬೀಳಿಸಲು ಯೋಗೇಶ್ವರ್ ಸ್ಕೆಚ್'

ಸಿ.ಪಿ. ಯೋಗೇಶ್ವರ್​ ಬಿಜೆಪಿ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ. ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ಈ ಕುರಿತಾಗಿ ಪ್ಲ್ಯಾನ್ ನಡೆಯುತ್ತಿದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಯೋಗೇಶ್ವರ್
ಯೋಗೇಶ್ವರ್

ರಾಮನಗರ: ಸಿ.ಪಿ. ಯೋಗೇಶ್ವರ್​ ಬಿಜೆಪಿ ಸರ್ಕಾರ ಕೆಡವಲು ಪ್ಲ್ಯಾನ್ ಮಾಡುತ್ತಿದ್ದಾರೆ. ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ಈ ಕುರಿತಾಗಿ ಪ್ಲ್ಯಾನ್ ನಡೆಯುತ್ತಿದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸ್ವಕ್ಷೇತ್ರ ಚನ್ನಪಟ್ಟಣದ ದೊಡ್ಡಮಳೂರಿನ ಬಮೂಲ್​ ಉತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು , ಸಿಪಿ ಯೋಗೇಶ್ವರ್ ಮತ್ತು  ಉದಯ್​ಗೌಡ ಬಿಎಸ್ ವೈ ಸರ್ಕಾರ ಬೀಳಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಉದಯ್ ಗೌಡ  ಬೆಂಗಳೂರಿನಲ್ಲಿ ಇಸ್ಪೀಟ್ ದಂಧೆ ನಡೆಸುತ್ತಿದ್ದಾನೆ. ನನ್ನ ಸರ್ಕಾರದಲ್ಲಿ ಅದಕ್ಕೆಲ್ಲಾ ಕಡಿವಾಣ ಹಾಕಿದ್ದೆ. ಹಾಗಾಗಿ ಇವರೆಲ್ಲಾ ಸೇರಿ ಹಣ ಹಾಕಿ ನನ್ನ ಸರ್ಕಾರ ಬೀಳಿಸಿದರು. ಈಗ ಈ ಕ್ಷೇತ್ರದ ಮಾಜಿ ಶಾಸಕ (ಸಿ.ಪಿ.ಯೋಗೇಶ್ವರ್​​​)ನ ಜೊತೆಗೆ ಸೇರಿ ಬಿಜೆಪಿ ಸರ್ಕಾರ ತೆಗೆಯಲು ಹೊರಟಿದ್ದಾರೆ ಎಂದು ಎಚ್​ಡಿಕೆ ಗಂಭೀರ ಆರೋಪ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com