ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಈಶ್ವರ ಖಂಡ್ರೆ ತೀವ್ರ ನಿರಾಸೆಗೊಳಗಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ ಒಬ್ಬರಿಗಿಂತ ಹೆಚ್ಚು ಕಾರ್ಯಾಧ್ಯಕ್ಷ ಹುದ್ದೆಗಳು ಬೇಡ ಎಂದು ಮೊದಲಿನಿಂದಲೂ ಖಂಡ್ರೆ ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದೀಗ ತಮ್ಮ ಜತೆ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ಸಹ ಕಾರ್ಯಾಧ್ಯಕ್ಷರನ್ನಾಗಿ ವರಿಷ್ಠರು ನೇಮಿಸಿದ್ದಾರೆ. ಆದರೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿಲ್ಲ ಎಂಬ ಬೇಸರದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಖಂಡ್ರೆ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement