'ಕಾಂಗ್ರೆಸ್ಸಿಗರಿಗೆ ಆಡಳಿತ ನಡೆಸಿ ಸಾಕಾಗೋಗಿದೆ, ನಿಮ್ಮ ಸರದಿ, ನೀವು ಮುಂದುವರಿಸಿ'

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡುತ್ತಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಕೆ.ಎಸ್.ಈಶ್ವರಪ್ಪರನ್ನು ಉದ್ದೇಶಿಸಿ ನನಗೆ ಸಾಕಾಗಿದೆ. ಇನ್ನು ಚುನಾವಣೆಗೆ ನಿಲ್ಲಲ್ಲ. ನೀವು ಮುಂದುವರಿಸಿ ಎಂದು ಹೇಳಿದರು.

ಆಗ ಸಚಿವ ಈಶ್ವರಪ್ಪ, ಕೊನೆ ಚುನಾವಣೆ ಅಂಥ ನೀವು ಹೇಳುವುದು ಬೇಡ. ಹಾಗೇ ಹೇಳಿದರೂ ಮತ್ತೆ ಮತ್ತೆ ಚುನಾವಣೆಗೆ ನಿಲ್ಲುತ್ತೀರಾ ಎಂದು ಚುನಾವಣಾ ನಿವೃತ್ತಿ ಘೋಷಣೆ ಮಾಡಿದರೂ ಮತ್ತೆ ಮತ್ತೆ ಚುನಾವಣೆಯಲ್ಲಿ ನಿಲ್ಲುತ್ತಿರುವ ಬಗ್ಗೆ ಕಿಚಾಯಿಸಿದರು.

ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಚುನಾವಣೆಗೆ ನಿಲ್ಲಬಾರದು ಎಂದುಕೊಳ್ಳುತ್ತೇನೆ. ಆದರೆ, ಅಷ್ಟೊತ್ತಿಗೆ ಯಾವುದಾದರೂ ಒಂದು ರಾಜಕೀಯ ಬೆಳವಣಿಗೆ ನಡೆಯುತ್ತೆ. ಆಗ ಹೈಕಮಾಂಡ್​​ ಒತ್ತಡ ಮೇರೆಗೆ ನಿಲ್ಲಲೇಬೇಕಾಗುತ್ತದೆ ಎಂದರು. 

ಎಸ್​​ಸಿ ಮತ್ತು ಎಸ್​​ಟಿ ವಿದ್ಯಾರ್ಥಿಗಳಿಗೆ ನೀಡಲಾದ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದರು ಸಿದ್ದರಾಮಯ್ಯ. ಇದಕ್ಕೆ ದನಿಗೂಡಿಸಿದ ಈಶ್ವರಪ್ಪ, ಈ ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಇಲ್ಲವಾದರೆ ಕೇವಲ ಚಟಕ್ಕೋಸ್ಕರ ಭಾಷಣ ಮಾಡಿದಂತಾಗುತ್ತದೆ. ಹೀಗಾಗಿ ನಾನು ವೈಯ್ಯಕ್ತಿಕವಾಗಿ ಲ್ಯಾಪ್​​ಟಾಪ್ ಖರೀದಿ ಅಕ್ರಮದ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com