ಇದು ಕಡೇ ಎಚ್ಚರಿಕೆ ಇಲ್ಲವಾದರೆ ಕಠಿಣ ಹೋರಾಟ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

 ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ.ರೈತರ ಬದುಕನ್ನು ಅಭದ್ರಗೊಳಿಸುವ,ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು.ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವ
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ.ರೈತರ ಬದುಕನ್ನು ಅಭದ್ರಗೊಳಿಸುವ,ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು.ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಈ ಬಗ್ಗೆ ಟ್ವಿಟರ್​ ನಲ್ಲಿ ಆಕ್ರೋಷ ವ್ಯಕ್ತಪಡಿಸಿರುವ ಅವರು, ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆ ಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ, ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆ ಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ(?) ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ(?) ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ, ದಾಸ್ಯಕ್ಕೊಳಪಡಿಸಬಾರದು ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ.ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸು ವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. 20 ಲಕ್ಷ ಕೋಟಿ ರೂಪಾತಿ ಪ್ಯಾಕೇಜ್ ವೇಳೆ ‘Localisation'(ಸ್ಥಳೀಕರಣ) ಬಗ್ಗೆ ಮೋದಿ ಮಾತನಾಡಿದ್ದರು.ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ localisation(?) ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com