ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಆರ್ ಆರ್ ನಗರ ಉಪಚುನಾವಣೆ: ಪ್ರಚಾರದ ವೇಳೆ ಡಿಕೆ ಶಿವಕುಮಾರ್‌ರಿಂದ 'ಜೈ ಶ್ರೀರಾಮ್' ಘೋಷಣೆ!

ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ.

ಬೆಂಗಳೂರು: ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ.

ಹಿಂದೂ ಜಾಗೃತ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. 

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರ ರ್ಯಾಲಿಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಅವರು ಕಳೆದ ರಾತ್ರಿ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ವೇಳೆ ಕುಸುಮಾರನ್ನು ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. 

ನಂತರ ಮೈಕ್ ಹಿಡಿದು ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳು ಸಹ ಧ್ವನಿ ಕೂಗಿಸಿದರು.

ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ ನಿಂದ ಕುಸುಮಾ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ರಣ ಕಣದಲ್ಲಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com