ಮೈಸೂರು: ಪಕ್ಷವನ್ನು ತೊರೆದಿರುವ ಭೈರತಿ ಬಸವರಾಜ್, ಎಸ್ ಟಿ ಸೋಮಶೇಖರ್ ಮತ್ತು ಮುನಿರತ್ನ ತಮ್ಮ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಭೈರತಿ ಬಸವರಾಜ್, ಮುನಿರತ್ನ ಹಾಗೂ ನನ್ನನ್ನು ಸಿದ್ದರಾಮಯ್ಯ ಬೆಳೆಸಿಲ್ಲ. ನಾವು ಮೊದಲಿನಿಂದಲೂ ಕಾಂಗ್ರೆಸ್ನಲ್ಲಿದ್ದೆವು. ಸಿದ್ದರಾಮಯ್ಯ ಕೊನೆಯಲ್ಲಿ ಕಾಂಗ್ರೆಸ್ ಸೇರಿದ್ದು. ನಾವೇನೂ ಸಿದ್ದರಾಮಯ್ಯಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ. ನಾವೇನೂ ಅವರ ಮೇಲೆ ಮುನಿಸಿಕೊಂಡು ಪಕ್ಷ ಬಿಟ್ಟಿಲ್ಲ ಎಂದು ಹೇಳಿದ್ದಾರೆ.
‘ನಾವು ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ತರುವ ಪ್ರಶ್ನೆಯೇ ಉದ್ಭವಿಸದು. ಅವರ ಮೇಲೆ ಮುನಿಸಿಕೊಂಡು ಪಕ್ಷ ಬಿಟ್ಟಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಆದ ಅವಮಾನದಿಂದಾಗಿ ಪಕ್ಷದಿಂದ ಹೊರಬಂದಿದ್ದೆವು. ಸಿದ್ದರಾಮಯ್ಯ ಆವಾಗಲೇ ನಮ್ಮ ಜತೆ ಮಾತ ನಾಡಬೇಕಿತ್ತು. ಸಮಸ್ಯೆಯನ್ನು ಅಂದೇ ಬಗೆಹರಿಸದೆ ಈಗ ಒದ್ದಾಡಿ ದರೆ ಏನು ಪ್ರಯೋಜನ?’ ಎಂದರು.
ಇನ್ನೂ ಇದೇ ವೇಳೆ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಎಚ್. ವಿಶ್ವನಾಥ್, ಸಿದ್ದರಾಮಯ್ಯ 2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
Advertisement