ಮಂಡ್ಯ ಕರ್ಮಭೂಮಿ, ರಾಜಕೀಯಕ್ಕೆ ಮೊದಲ ಆದ್ಯತೆ- ನಿಖಿಲ್ ಕುಮಾರಸ್ವಾಮಿ

 ಮಂಡ್ಯ ರಾಜಕೀಯಕ್ಕೆ ಪ್ರವೇಶ ಕೊಡುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ನಿಖಿಲ್ ಕುಮಾರಸ್ವಾಮಿ ಸೂಕ್ಷ್ಮವಾಗಿ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ರಾಜಕೀಯಕ್ಕೆ ಪ್ರವೇಶ ಕೊಡುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ನಿಖಿಲ್ ಕುಮಾರಸ್ವಾಮಿ ಸೂಕ್ಷ್ಮವಾಗಿ ಹೇಳಿದ್ದಾರೆ.

ರಾಮನಗರ ಕ್ಷೇತ್ರ ತಂದೆ ಹೆಚ್.ಡಿ.ಕುಮಾರಸ್ವಾಮಿಗೆ ರಾಜಕೀಯ ಪುನರ್ಜನ್ಮ ನೀಡಿ ಬೆಳೆಸಿದೆ. ರಾಮನಗರದಲ್ಲಿ ನಿಖಿಲ್ ಕೂಡ ಬರಲಿ ಎಂಬುದು ಅಲ್ಲಿನ ಕಾರ್ಯಕರ್ತರ ಆಸೆಯಾಗಿದ್ದರೂ ತಮ್ಮ ಅಭಿಮಾನಿಗಳು ರಾಜ್ಯಾದ್ಯಂತ ಇರುವುದರಿಂದ ಕರ್ಮಭೂಮಿಯಾಗಿರುವ ಮಂಡ್ಯವನ್ನು ತಾವು ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷಕ್ಕೆ ತಾವು ಮೊದಲ ಆದ್ಯತೆ ನೀಡುತ್ತಿದ್ದು, ನಂತರದ ಆಯ್ಕೆ ಸಿನಿಮಾ ಕ್ಷೇತ್ರ.  ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಂದ ಮಾತ್ರಕ್ಕೆ ಯಾವ ರಾಜಕಾರಣಿಯೂ ಮನೆಯಲ್ಲಿ ಕೂರುವುದಿಲ್ಲ. ಜನರೊಂದಿಗೆ ನಾವಿರುತ್ತೇವೆ, ಜನ ತಮ್ಮನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎನ್ನುವ ಮೂಲಕ ಮತ್ತೆ ಮಂಡ್ಯ ರಾಜಕೀಯಕ್ಕೆ ಬರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com