ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ: ಸಿದ್ದರಾಮಯ್ಯ

ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿಸ ಎಂದು ಸಿದ್ದರಾಮಯ್ಯ ಆಡಳಿತಾ ರೂಢ ಬಿಜೆಪಿಯನ್ನು ಟೀಕಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯ ಸರ್ಕಸ್ ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿಸ ಎಂದು ಸಿದ್ದರಾಮಯ್ಯ ಆಡಳಿತಾ ರೂಢ ಬಿಜೆಪಿಯನ್ನು ಟೀಕಿಸಿದ್ದಾರೆ.

 ಹಿಂದೆಲ್ಲ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗ ಟ್ವೀಟ್ ಮಾಡಿರುವ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಮುಖ್ಯಮಂತ್ರಿ ಬದಲಾವಣೆಯೋ-ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು  ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಒತ್ತಾಯಿಸಿದ್ದಾರೆ.

'ಹಿಂದೆಲ್ಲ ಬಿಜೆಪಿ  ನಾಯಕರು,‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ  ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ  ಅದೇ ಆರೋಪಗಳನ್ನು  ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ. ಸಂಪುಟ ವಿಸ್ತರಣೆಯೋ,  ಪುನಾರಚನೆಯೋ, ಮುಖ್ಯಮಂತ್ರಿ  ಬದಲಾವಣೆಯೋ -ಇವೆಲ್ಲ ನಿಮ್ಮ ಪಕ್ಷದ ಹಣೆಬರಹ. ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com