ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ: ಆರ್.ಅಶೋಕ್

ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ. ತಾವು ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಸಂಘ ಪರಿವಾರದಿಂದಲೇ ಬಂದವರು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ್
ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು: ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ. ತಾವು ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಸಂಘ ಪರಿವಾರದಿಂದಲೇ ಬಂದವರು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶೋಕ್, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಿಜಕ್ಕೂ ಗೊಂದಲವಿರುವುದು ಕಾಂಗ್ರೆಸ್ ನಲ್ಲಿಯೇ. ಇದನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೇ ಹೇಳಿದ್ದಾರೆ. ಕಾಂಗ್ರೆಸ್ ತಟ್ಟೆಯಲ್ಲಿ ನೊಣ, ಹೆಗ್ಗಣ ಬಿದ್ದಿದ್ದರೂ ಅದನ್ನು ನೋಡದೇ ಬಿಜೆಪಿ ತಟ್ಟೆಯಲ್ಲಿ ಸೊಳ್ಳೆ ಬಿದ್ದಿರುವುದನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಲವ್ ಜಿಹಾದ್ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಂಡಿದ್ದು, ಇದರ ವಿರುದ್ಧ ಕಾನೂನು ಮಾಡಿಯೇ ಮಾಡುತ್ತೇವೆ. ಹೆಣ್ಣುಮಕ್ಕಳ ಮತಾಂತರ ತಡೆಯುತ್ತೇವೆ. ಲವ್ ಜಿಹಾದ್ ಭಾರತ ದೇಶದ ಸಂಸ್ಕೃತಿಗೆ ಮಾರಕ. ನೂರಕ್ಕೆ ನೂರು ಲವ್ ಜಿಹಾದ್ ನಿಷೇಧಿಸಿಯೇ ತೀರುತ್ತೇವೆ. ಅದರಂತೆ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸುವುದಾಗಿ ಅಶೋಕ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com