ಡ್ರಗ್ ಮಾಫಿಯಾ ಹಣದಲ್ಲಿ ಸಿದ್ದು ಸರ್ಕಾರ ನಡೆಸುತ್ತಿದ್ದರು ಹೇಳಿಕೆ: ನಳಿನ್ ಕುಮಾರ್ ಕಟೀಲ್ ವಿರುದ್ಧ ಹರಿಹಾಯ್ದ ಡಿಕೆಶಿ

ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಡಿಕೆ. ಶಿವಕುಮಾರ್
ಡಿಕೆ. ಶಿವಕುಮಾರ್

ಕಾರವಾರ: ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬುದು ಸತ್ಯವೇ ಆಗಿದ್ದರೆ, ಎಫ್ಐಆರ್ ದಾಖಲಿಸಲಿಲ್ಲವೇಕೆ? ನಳಿನ್ ಕುಮಾರ್ ಕಟೀಲ್ ಅವರಿಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಆಸ್ಪತ್ರೆಗೆ ಸೇರಿಸಬೇಕು. ಅವರ ಹೇಳಿಕೆ ಅವರಿಗೇ ಅರ್ಥವಾಗಬೇಕು ಎಂದು ಹೇಳಿದ್ದಾರೆ. 

ಯಾರೋ ಸಣ್ಣ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸರ್ಕಾರದಲ್ಲಿ ಇದ್ದವನೇ. ಅವರು ಎಫ್ಐಆರ್ ಹಾಕಲಿ ನೋಡೋ. ನಮ್ಮಲ್ಲಿ ಇದ್ದ ಸಾಕಷ್ಟು ನಾಯಕರು ಅವರ ಸರ್ಕಾರದಲ್ಲಿ ಇದ್ದಾರಲ್ಲವೇ... ಅವರ ಮೇಲೂ ದೂರು ದಾಖಲು ಮಾಡಲಿ ಎಂದು ಸವಾಲೆಸೆದಿದ್ದಾರೆ. 

ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನವಿದೆ ಎಂದು ತಿಳಿದುಕೊಂಡಿದ್ದೆ. ಈ ರೀತಿಯ ಮಾತುಗಳಿಂಗ ಅವರ ಸ್ಥಾನಕ್ಕೆ ಕಳಂಕ ಬಂದ ಹಾಗಾಗುತ್ತದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ. ಬಿಜೆಪಿಯವರ ಆಂತರಿಕ ವಿಚಾರದಲ್ಲಿ ನಾವು ತಲೆ ಹಾಕುವುದಿಲ್ಲ. ಯಾರನ್ನಾದರೂ ಸರ್ಕಾರದಲ್ಲಿ ಇಟ್ಟುಕೊಳ್ಳಲಿ, ಬಿಡಲಿ. ಆದರೆ, ನಮ್ಮ ಪಕ್ಷದಿಂದ ಅಲ್ಲಿದೆ ಹೋದವ ಕೆಲವರು ಬಿಜೆಪಿಗೆ ಏನನ್ನು ಮಾಡಬೇಕೋ ಅದನ್ನೇ ಮಾಡುತ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಕೂಡ ಅನುಭವಿಸುತ್ತಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com