ಅಮಿತ್ ಶಾ ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣ ದೆಹಲಿಗೆ ತೆರಳುತ್ತೇನೆ: ಸಿಎಂ ಯಡಿಯೂರಪ್ಪ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣವೇ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚೆರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣವೇ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚೆರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ದೆಹಲಿಗೆ ತೆರಳುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಮಿತ್ ಶಾ ಅವರ ಭೇಟಿಗೆ ಟೈಮ್ ಕೇಳಿದ್ದೇನೆ. ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣ ದೆಹಲಿಗೆ ತೆರಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಒಂದು ಬಾರಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿ ಬಂದಿದ್ದಾರೆ. ಆದರೆ ಇದುವರೆಗೂ ಸಂಪುಟ ವಿಸ್ತರಣೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಮತ್ತೆ ದೆಹಲಿಗೆ ಹೋಗಲು ಸಿದ್ಧರಾಗಿದ್ದು, ಅಮಿತ್ ಶಾ ಅವರ ಅಪಾಯಿಂಟ್ಮೆಂಟ್ ಕೇಳಿದ್ದಾರೆ.

ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಅನುಮಾನ. ಆದರೂ ದೆಹಲಿಗೆ ಭೇಟಿ ನೀಡಿ ವರಿಷ್ಠಿರೊಂದಿಗೆ ಮಾತುಕತೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com