ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ, ಕುಗ್ಗುವುದಾಗಲಿ ದೂರದ ಮಾತು: ಡಿ.ಕೆ.ಸುರೇಶ್

ಸಿಬಿಐ ಸೋಮವಾರ ಬೆಳ್ಳಂಬೆಳಗ್ಗೆಯೇ ನಮ್ಮ ಮನೆಯ ಮೇಲೆ ದಾಳಿ ಮಾಡಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ. ಸಹಕಾರ ಸಿಕ್ಕಿದೆ.
ಡಿಕೆ ಸುರೇಶ್
ಡಿಕೆ ಸುರೇಶ್

ಬೆಂಗಳೂರು: ಸಿಬಿಐ ಸೋಮವಾರ ಬೆಳ್ಳಂಬೆಳಗ್ಗೆಯೇ ನಮ್ಮ ಮನೆಯ ಮೇಲೆ ದಾಳಿ ಮಾಡಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ. ಸಹಕಾರ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ಧರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದು ಡಿಕೆ ಸುರೇಶ್ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com