ಕೇರಳ ಜೆಡಿಎಸ್ ಘಟಕ ವಿಸರ್ಜಿಸಿದ ದೇವೇಗೌಡ: ಹೊಸ ಅಧ್ಯಕ್ಷರ ನೇಮಕ

ಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ ಹಿನ್ನಲೆ ಕೇರಳದ ಜೆಡಿಎಸ್​ ಘಟಕವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಸರ್ಜಿಸಿದ್ದಾರೆ
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ಬೆಂಗಳೂರು: ಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ ಹಿನ್ನಲೆ ಕೇರಳದ ಜೆಡಿಎಸ್​ ಘಟಕವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಸರ್ಜಿಸಿದ್ದಾರೆ.

ಕೇರಳದ ಜೆಡಿಎಸ್​ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾನು,  ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಕುರಿತು ಕಾರಣಕೇಳಿ ನೋಟಿಸ್​ ಕೂಡ ಜಾರಿ ಮಾಡಲಾಗಿತ್ತು. ಆದರೆ, ಇದಕ್ಕೆ ಅವರಿಂದ ಉತ್ತರ ಬಂದಿಲ್ಲ. ಈ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಸಚಿವ ಮ್ಯಾಥ್ಯು ಟಿ ಥಾಮಸ್​ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್​ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿರುವ ಬಿಎಂ ಫಾರೂಖ್​​ ಸೆ.24ರಂದು ಕಾರಣ ಕೇಳಿ ಸಿಕೆ ನಾನು ಅವರಿಗೆ ನೋಟಿಸ್​ ಜಾರಿ ಮಾಡಿದ್ದರು. ಈ ನೋಟಿಸ್​ಗೆ ಉತ್ತರಿಸದ ಅವರು ಯಾವುದೇ ನಿರ್ದೇಶನಗಳನ್ನು ಅನುಸರಿಸುವಲ್ಲಿ ವಿಫಲರಾಗಿದ್ದರು. 

ಸಿಕೆ ನಾನು ರಾಜ್ಯ ಘಟಕವನ್ನು ಬಲಪಡಿಸುವ ಬದಲು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದು, ಪಕ್ಷ ರಚಿಸಿದ ಪ್ರಮುಖ ಸಮಿತಿಗಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com