ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ: ಆರ್ ಆರ್ ನಗರಕ್ಕೆ ಮುನಿರತ್ನ, ಶಿರಾಗೆ ರಾಜೇಶ್ ಗೌಡ ಗೆ ಟಿಕೆಟ್

ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.
ರಾಜೇಶ್ ಗೌಡ ಮುನಿರತ್ನ
ರಾಜೇಶ್ ಗೌಡ ಮುನಿರತ್ನ

ಬೆಂಗಳೂರು: ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.

ಸುಪ್ರೀಂ ಕೋರ್ಟ್ ನಲ್ಲಿ ಮುನಿರತ್ನ ವಿರುದ್ಧದ ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥ್ಯಿ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿ ವಜಾಗೊಂಡ ಬೆನ್ನಲ್ಲೆ ಎರಡು ಕ್ಷೇತ್ರಗ ಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ. 

ಇತ್ತೀಚೆಗೆ ಬಿಜೆಪಿ ಸೇರಿದ್ದ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ. ರಾಜೇಶ್ ಗೌಡ ಅವರಿಗೆ ಶಿರಾದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿದೆ.  ಹಾಗೆಯೇ ಆರ್,ಆರ್, ನಗರಕ್ಕೆ ಮುನಿರತ್ನಗೆ ಟಿಕೆಟ್ ನೀಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com