ಸತತ ಎರಡು ಬಾರಿ ಗೆಲ್ಲಿಸಿದ ಜನ ಈ ಭಾರಿಯೂ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡಲಿದ್ದಾರೆ: ಡಿಕೆ.ಶಿವಕುಮಾರ್

ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ವಿದ್ಯಾವಂತರಿದ್ದಾರೆ, ಬುದ್ದಿವಂತರಿದ್ದಾರೆ. ಸತತ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವ ಜನ ಈ ಬಾರಿಯೂ ನಮಗೆ ಗೆಲುವು ತಂದುಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ವಿದ್ಯಾವಂತರಿದ್ದಾರೆ, ಬುದ್ದಿವಂತರಿದ್ದಾರೆ. ಸತತ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವ ಜನ ಈ ಬಾರಿಯೂ ನಮಗೆ ಗೆಲುವು ತಂದುಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಬಿಟ್ಟು ಮುನಿರತ್ನ ಎಲ್ಲಿಗೆ ಹೋದರು, ಯಾಕೆ ಹೋದರೆ ಎನ್ನುವುದನ್ನು ನಾನು ಯಾವತ್ತೂ ಪ್ರಶ್ನಿಸಿಲ್ಲ. ಕಳೆದ ಭಾರಿಗಿಂತ ಹೆಚ್ಚಿನ ಮತ ಪಡೆದು ಈ ಭಾರಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ. ಇಲ್ಲಿನ ಜನ ನಮಗೆ ಮತ್ತೊಮ್ಮೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಕ್ಷೇತ್ರ ರಚನೆಯಾದ ಮೇಲೆ ಇಂಥ ಉತ್ತಮ ವಿದ್ಯಾವಂತೆ ಅಭ್ಯರ್ಥಿ ನಮ್ಮ ಪಕ್ಷಕ್ಕೆ ಸಿಕ್ಕಿರಲಿಲ್ಲ. ಈ ಚುನಾವಣೆಯಿಂದ ಬಿಜೆಪಿ ಸರ್ಕಾರ ಮೋದಿ ಸರ್ಕಾರ ಬಿದ್ದೋಗತ್ತೆ ಅಂತಲ್ಲ. ಎರಡೂ ಬಿಜೆಪಿ ಸರ್ಕಾರಕ್ಕೆ ಒಂದು ಸಂದೇಶ ರವಾನೆ ಮಾಡಬೇಕಾಗಿದೆ ಎಂದರು.

ಮುನಿರತ್ನಗೆ, ಅಶೋಕ್ ಗೆ, ಬಿಜೆಪಿಯವರಿಗೆ ಯಾರು ಬೇಕಾದರು ಪುಡಿ ಮಾಡೋ ಶಕ್ತಿ ಇದೆ ಬಿಡಿ. ಡಿಜೆ ಹಳ್ಳಿ ಗಲಭೆ ಪ್ರಕರಣ ವಿಚಾರದಲ್ಲಿ ಕಾಂಗ್ರೆಸ್ ಗೆ ಏನಾದ್ರೂ ಕಳಂಕ ತರಬೇಕು ಅಂತ ಪೊಲೀಸರ ದುರ್ಬಳಕೆ ಮಾಡಿಕೊಂಡು ಸುಳ್ಳು ರಿಪೋರ್ಟ್ ರೆಡಿ ಮಾಡಿದ್ದಾರೆ. ಯಾವ ಕಾಂಗ್ರೆಸ್ ಮುಖಂಡರೂ ಇದರಲ್ಲೂ ಭಾಗಿ ಆಗಿಲ್ಲ. ಪೊಲೀಸ್ ಸಂಪೂರ್ಣ ವಿಫಲರಾಗಿದ್ದಾರೆ. ರಾತ್ರೋರಾತ್ರಿ ಪೊಲೀಸರ ಮೇಲೆ ಒತ್ತಡ ತಂದು ಚಾರ್ಜ್ ಶೀಟ್ ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com