ಕುಸುಮಾ ವಿರುದ್ಧ ಎಫ್ ಐ ಆರ್: ಸಬ್ ಇನ್ಸ್ ಪೆಕ್ಟರ್ ವರ್ಗಾವಣೆಗೆ ಆಯೋಗಕ್ಕೆ ಕಾಂಗ್ರೆಸ್ ಮನವಿ

ಆರ್.ಆರ್ .ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ ಐಆರ್ ದಾಖಲಿಸಿರುವ ಆರ್. ಆರ್. ನಗರ ಠಾಣೆಯ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಎಚ್.ಕುಸುಮಾ
ಎಚ್.ಕುಸುಮಾ

ಬೆಂಗಳೂರು: ಆರ್.ಆರ್ .ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ ಐಆರ್ ದಾಖಲಿಸಿರುವ ಆರ್. ಆರ್. ನಗರ ಠಾಣೆಯ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಈ ಸಂಬಂಧ ಮುಖ್ಯ ಚುನಾವಣಾಧಿಕಾರಿಗೆ ಮನವಿ ಮಾಡಿರುವ ಕಾಂಗ್ರೆಸ್ ಸದಸ್ಯರು, ಎಸ್ ಐ ನವೀನ್ ಅವರು ಪೂರ್ವಾಗ್ರಹ ಪೀಡಿತರಾಗಿ ಕುಸುಮಾ ವಿರುದ್ದ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಈ ಎಫ್ ಐ ಆರ್ ರಾಜಕೀಯ ದುರುದ್ದೇಶದಿಂದ ಕೂಡಿದೆ, ಎಸ್ ಐ ನವೀನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಆಪ್ತ ಸ್ನೇಹಿತರಾಗಿದ್ದಾರೆ. ಮುನಿರತ್ನ ಸೂಚನೆಯಂತೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖಂಡರಾದ ವಿ.ಎಸ್ ಉಗ್ರಪ್ರ ನೇತೃತ್ವದ ನಿಯೋಗ ಆಯೋಗ ದೂರು ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com