ಜಿಎಸ್'ಟಿ ಪರಿಹಾರ ನಮ್ಮ ಹಕ್ಕು: ಕಾಂಗ್ರೆಸ್

ರಾಜ್ಯ ಜಿಎಸ್'ಟಿ ತೆರಿಗೆ ಪಾಲು ನಮ್ಮ ರಾಜ್ಯದ ಹಕ್ಕು. ಕೇಂದ್ರ ಸರ್ಕಾರ ಕೊಡುವ ಭಿಕ್ಷೆ ಅಲ್ಲ. ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಎನ್ನುತ್ತಿದೆ ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯ ಜಿಎಸ್'ಟಿ ತೆರಿಗೆ ಪಾಲು ನಮ್ಮ ರಾಜ್ಯದ ಹಕ್ಕು. ಕೇಂದ್ರ ಸರ್ಕಾರ ಕೊಡುವ ಭಿಕ್ಷೆ ಅಲ್ಲ. ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಎನ್ನುತ್ತಿದೆ ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರು, ರಾಜ್ಯದ ಜಿಎಸ್ ಟಿ ತೆರಿಗೆ ಪಾಲು ನಮ್ಮ ರಾಜ್ಯದ ಹಕ್ಕು. ಕೇಂದ್ರ ಸರ್ಕಾರ ಕೊಡುವ ಭಿಕ್ಷೆ ಅಲ್ಲ. ನಮ್ಮ ಪಾಲಿನ ಹಣವನ್ನ ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಅಂತಿದೆ ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದಾರೆ. 

ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರೇ ಈಗ ಎಲ್ಲಿದ್ದೀರಿ? ಅಂಜುಬುರುಕತನ ಬಿಟ್ಟು ಕನಿಷ್ಠ ಪ್ರಧಾನಿ ಬಳಿ ಮಾತನಾಡಿ ನಮ್ಮ ಪಾಲಿನ ತೆರಿಗೆ ಹಣ ಕೊಡಿಸಿ ನ್ಯಾಯ ಒದಗಿಸುವಿರಾ? ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com