'ಬೆಂಗಳೂರು ಉಗ್ರರ ತಾಣ' ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 'ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಟೀಕಿಸಿದ್ದಾರೆ.

'ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು. ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದು ತಿಳಿಸಿದ್ದಾರೆ.

'ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ.  ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com