ಶಿರಾ ಉಪಚುನಾವಣೆ: ನಮಗೆ ಎಲ್ಲಾ ಚುನಾವಣೆಯೂ ಪ್ರತಿಷ್ಠೆಯೇ; ಎಚ್‌ಡಿಕೆ ಟ್ವೀಟ್‌ಗೆ ಡಿಕೆಶಿ ತಿರುಗೇಟು

ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ನಡುವೆ ವಾಕ್ ಸಮರ ಶುರುವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ-ಶಿವಕುಮಾರ್
ಎಚ್ ಡಿ ಕುಮಾರಸ್ವಾಮಿ-ಶಿವಕುಮಾರ್

ಬೆಂಗಳೂರು: ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ನಡುವೆ ವಾಕ್ ಸಮರ ಶುರುವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. 

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಲ್ಲ ಚುನಾವಣೆಗಳು ಎಲ್ಲ ಪಕ್ಷಗಳಿಗೆ ಪ್ರತಿಷೆಯಾಗಿರುತ್ತದೆ. ಯಾವುದೇ ಒಂದು ಕ್ಷೇತ್ರದ ಚುನಾವಣೆ ಮಾತ್ರ ಪ್ರತಿಷ್ಠೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. 

ಪ್ರಮುಖ ಚುನಾವಣೆ ಆಗಲಿ ಉಪ ಚುನಾವಣೆ ಆಗಲಿ, ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯೇ. ಈ ಹಿಂದೆ ಹೇಗೆ ಚುನಾವಣೆಗಳನ್ನು ನಡೆಸಿದ್ದೇವೋ ಅದೇ ರೀತಿ ಈ ಚುನಾವಣೆಯನ್ನು ನಡೆಸುತ್ತೇವೆ ಎಂದರು.

ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com