ಮಂಗಳಾ ಅಂಗಡಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ: ಬಿಎಸ್'ವೈ ವಿಶ್ವಾಸ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳಾ ಅಂಗಡಿ
ಮಂಗಳಾ ಅಂಗಡಿ
Updated on

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭರ್ಜರಿ ಪ್ರಚಾರ ನಡೆಸಿದರು. ದಿನವಿಡೀ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದ ಅವರು, ಗೋಕಾಕ್ ನಲ್ಲಿ ಬೃಹತ್ ಶೋ ನಡೆಸಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಾಲ್ಕು ಲಕ್ಷ ಮತಗಳ ಅಂತದಿಂದ ಭರ್ಜರಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. ಬೆಳಗಾವಿ ಲೋಕಸಭೆಗೆ ಮೊದಲ ಬಾರಿ ಮಹಿಳೆಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದ್ದೇವೆ. ಗೋಕಾಕ ಮತ್ತು ಅರಭಾವಿಯಲ್ಲೂ ಪಕ್ಷದ ಪರ ಉತ್ತಮ ವಾತಾವರಣ ಇದೆ. ರಮೇಶ್ ಜಾರಕಿಹೊಳಿ ಸಹೋದರರು ಕೂಡ ಸ್ಪಂದಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಪ್ರಚಾರ ನಡೆಸುತ್ತಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಮುಳುಗುವ ಹಡಗು. ಆದರೆ, ನಾವು ಶಕ್ತಿ ಮೀರಿ ರಾಜ್ಯ ಅಭಿವೃದ್ಧಿ ಮಾಡುತ್ತಿದ್ದೇವೆ. ಬೆಳಗಾವಿಯನ್ನು ಮಾದರಿ ಜಿಲ್ಲೆಯಾಗಿಸಲು ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರಕ್ಕೆ ಬಂದದ್ದು ನಮಗೆ ಆನೆ ಬಲಬಂದಂತಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com