'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.
ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್
ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್
Updated on

ಬೆಂಗಳೂರು: ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ಸಂಸದ ಡಿಕೆ ಸುರೇಶ್‌ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಪ್ರಶ್ನಿಸಿದೆ.

ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಗೆದ್ದು ಸಂಸದರಾದರೆ ಬಿಜೆಪಿ ಸಂಸದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ತಲೆಭಾಗಿ ಬೇಡುವುದಿಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುರ್ಜೇವಾಲ ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿರುವ ಬಿಜೆಪಿ, ನಿಮ್ಮ ಮಾತಿನ ಪ್ರಕಾರ ಕನಕಪುರದ ಮಹಾನಾಯಕನ ಸಹೋದರ ಡಿಕೆ ಸುರೇಶ್ ಅಸಮರ್ಥರೇ!? ಡಿಕೆ ಸುರೇಶ್‌ ಅವರ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com