ನಾನು ಅದೃಷ್ಟವಂತ ಮುಖ್ಯಮಂತ್ರಿ, ಗಂಟೆಯೊಳಗೆ ಖಾತೆ ಹಂಚಿಕೆ ಮಾಡುತ್ತೇನೆ: ಬಸವರಾಜ ಬೊಮ್ಮಾಯಿ

ನಾನು ಅದೃಷ್ಟವಂತ ಮುಖ್ಯಮಂತ್ರಿ, ಇದೇ ಖಾತೆ ಬೇಕೆಂದು ಯಾವ ಸಚಿವರು ನನಗೆ ಒತ್ತಡ ಹಾಕುತ್ತಿಲ್ಲ, ಗಂಟೆಯೊಳಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ನಾನು ಅದೃಷ್ಟವಂತ ಮುಖ್ಯಮಂತ್ರಿ, ಇದೇ ಖಾತೆ ಬೇಕೆಂದು ಯಾವ ಸಚಿವರು ನನಗೆ ಒತ್ತಡ ಹಾಕುತ್ತಿಲ್ಲ, ಗಂಟೆಯೊಳಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ. ನಗರದಲ್ಲಿರುವ ತರಳುಬಾಳು ಮಠಕ್ಕೆ ಶನಿವಾರ ತೆರಳಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, ‘ಯಾರೂ ಯಾವುದೇ ಖಾತೆಗೂ ಪಟ್ಟು ಹಿಡಿದಿಲ್ಲ. ನಾನು ಅದೃಷ್ಟವಂತ ಮುಖ್ಯಮಂತ್ರಿ. ಸಚಿವ ಸಂಪುಟದವರು ಯಾರೂ ಪ್ರಭಾವ ಬೀರಿಲ್ಲ. ಕೆಲವರು ಇಂಥ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆಯೇ ಹೊರತು ಯಾರ ಒತ್ತಡವೂ ಇಲ್ಲ’ ಎಂದರು.

‘ಕೋವಿಡ್‌ ಸಭೆಯ ಬಳಿಕ ವಚನಾನಂದ ಸ್ವಾಮೀಜಿ ಭೇಟಿ ಮತ್ತು ಸಿದ್ದಗಂಗಾ ಮಠಕ್ಕೆ ತೆರಳಿ ರಾತ್ರಿ ತಡವಾಗಿ ಬಂದೆ. ಹೀಗಾಗಿ, ಖಾತೆ ಹಂಚಿಕೆ ಸಾಧ್ಯ ಆಗಿಲ್ಲ. ರಾತ್ರಿ ತಡವಾಗಿ ಖಾತೆ ಹಂಚಿಕೆ ಮಾಡಬೇಡಿ ಎಂದು ಕೆಲವು ಸಲಹೆ ನೀಡಿದರು. ಹೀಗಾಗಿ ಮಾಡಿಲ್ಲ’ ಎಂದು ಸಮರ್ಥನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com