ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ‍್ಯಾಲಿ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ‍್ಯಾಲಿ ನಡೆಸಿದರು.
ಶಾಸಕ ಅಪ್ಪಚ್ಚು ರಂಜನ್ ಬೆಂಬಲಿಗರು
ಶಾಸಕ ಅಪ್ಪಚ್ಚು ರಂಜನ್ ಬೆಂಬಲಿಗರು

ಮಡಿಕೇರಿ: ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ‍್ಯಾಲಿ ನಡೆಸಿದರು. ಸುಂಟಿಕೊಪ್ಪದಿಂದ ಆರಂಭವಾದ ಈ ರ‍್ಯಾಲಿ ಸೋಮವಾರ ಪೇಟೆ, ಕುಶಾಲನಗರ ಮತ್ತಿತರ ಕಡೆಗಳಿಂದ ಟೆಂಪೋ ಟ್ರಾವಲರ್ಸ್ ಸೇರಿದಂತೆ ಸುಮಾರು 130 ವಾಹನಗಳೊಂದಿಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನವನ್ನು ತಲುಪಿತು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದಾಗ ಪೊಲೀಸರು ಬ್ಯಾರಿಕೇಡ್ ಮೂಲಕ ಅವರನ್ನು ತಡೆದರು. ಆದಾಗ್ಯೂ, ಸ್ವಲ್ಪ ಸಮಯದ ನಂತರ ಕೆಲ ಪ್ರತಿಭಟನಾಕಾರರನ್ನು ಮುಖ್ಯಮಂತ್ರಿ ಜೊತೆಗೆ ಮಾತನಾಡಲು ಅವಕಾಶ ಮಾಡಿಕೊಡಲಾಯಿತು. ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿದ ಅಪ್ಪಚ್ಚು ರಂಜನ್ ಬೆಂಬಲಿಗರು, ಸಂಪುಟದಲ್ಲಿ ತಮ್ಮ ನೆಚ್ಚಿನ ಶಾಸಕರಿಗೆ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಐದು ಬಾರಿ ಶಾಸಕರಾಗಿದ್ದರೂ ಸಚಿವ ಸ್ಥಾನ ನೀಡದಂತೆ ವಂಚಿಸಲಾಗಿದೆ. ಬೇರೆ ಜಿಲ್ಲೆಯಿಂದ ಬಂದವರಿಗೆ ಉಸ್ತುವಾರಿ ನೀಡುವುದರಿಂದ ಏನು ಪ್ರಯೋಜನವಾಗಲಿದೆ ಎಂದು ಪ್ರಶ್ನಿಸಿದ್ದರು.

ಜಿಲ್ಲೆಯಲ್ಲಿ ಪಕ್ಷದ ಬೆಳವಣಿಗೆಗಾಗಿ ಕಳೆದ 30 ವರ್ಷಗಳಿಂದ ಅಪ್ಪಚ್ಚು ರಂಜನ್ ಕೆಲಸ ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ವಿರುದ್ಧ ಹೋರಾಡಿ ಪ್ರಯತ್ನದ ಫಲವಾಗಿ ಶಾಲಾ ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಪಾಠ ಇಲ್ಲದಂತಾಗಿದೆ. ರಂಜನ್‌ಗೆ  ಸಚಿವ ಸ್ಥಾನ ನಿರಾಕರಿಸಲಾಗಿದ್ದರೂ, ಟಿಪ್ಪು ಜಯಂತಿಗೆ ಆಶ್ವಾಸನೆ ನೀಡಿದ ಸಚಿವ ಆನಂದ್ ಸಿಂಗ್‌ಗೆ ಸಂಪುಟ ಸ್ಥಾನವನ್ನು ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com