2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಟಿಎಂಸಿ ಕಣ್ಣು: ರಾಜ್ಯ ಕಾಂಗ್ರೆಸ್ ನಾಯಕರ ಓಲೈಕೆ!

ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್  ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.
ಟಿಎಂಸಿ ಬಾವುಟ( ಸಂಗ್ರಹ ಚಿತ್ರ)
ಟಿಎಂಸಿ ಬಾವುಟ( ಸಂಗ್ರಹ ಚಿತ್ರ)
Updated on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ತೃಣಮೂಲ ಕಾಂಗ್ರೆಸ್ ಕಣ್ಣಿಟ್ಟಿದೆ.

ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್  ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.

ಪ್ರಶಾಂತ್ ಕಿಶೋರ್ ನಿಜವಾಗಿಯೂ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅದರ ಬಗ್ಗೆ ಅವರಿಗೆ ತಿಳಿದಿದೆ ಎಂದು ಉನ್ನತ ಸ್ಥಾನದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.  ಆದರೆ ಈ ವಿಷಯದ ಬಗ್ಗೆ ಈಗ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ಪ್ರಮುಖ ನಾಯಕರನ್ನು ಪ್ರಶಾಂತ್ ಕಿಶೋರ್ ಸಂಪರ್ಕಿಸಿದ್ದಾರೆ.  ವಿಧಾನಪರಿಷತ್ ಸದಸ್ಯರಾಗಿರುವ ರಾಜಕೀಯ ಮ್ಯಾನೇಜರ್ ಟಿಎಂಸಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋವಾದಲ್ಲಿ ಕಾಂಗ್ರೆಸ್ ಜಿಎಫ್ ಪಿ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿಯೂ ಅದೇ ರೀತಿ ಟಿಎಂಸಿ ತಂತ್ರ ರೂಪಿಸಲು ಮುಂದಾಗಿದೆ,  ಬುಧವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂಬೈಗೆ ಬಂದಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗೂಡಿದರೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವುದು ತುಂಬಾ ಸುಲಭ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com