ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ!

ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ  ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Updated on

ಬೆಳಗಾವಿ: ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ  ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.

ಮಂಗಳವಾರ ಮಂಡನೆಯಾಗಿರುವ ಮತಾಂತರ ನಿಷೇಧ ಕುರಿತು ಇಂದು ನಡೆಯಲಿರುವ ಚರ್ಚೆ ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ. ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಕಾಯುತ್ತಿದೆ. ಬುಧವಾರ ಈ ಕುರಿತ ಚರ್ಚೆಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಸಭಾಧ್ಯಕ್ಷರು ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಚರ್ಚೆಗೆ ಇಡೀ ದಿನ ಮೀಸಲಿಟ್ಟ ನಂತರ ಅದಕ್ಕಾಗಿ ಒತ್ತಾಯಿಸುವುದನ್ನು ವಿರೋಧಿಸಲು ನಿರ್ಧರಿಸಿದರು.

ಹಲವಾರು ಕಾಂಗ್ರೆಸ್ ಶಾಸಕರು ಮಸೂದೆಯಲ್ಲಿನ ಹಲವಾರು ಷರತ್ತುಗಳಿಗೆ ಗಂಭೀರ ಆಕ್ಷೇಪಣೆಗಳನ್ನು ಎತ್ತಿದ್ದಾರೆ ಮತ್ತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಸಿಗುತ್ತದೆಯೇ ಎಂದು ಆಶ್ಚರ್ಯ ಪಡುತ್ತಿದ್ದಾರೆ. ಮಸೂದೆಯಲ್ಲಿನ ಅನೇಕ ಆಕ್ಷೇಪಗಳಿವೆ. ಇಂದು ಈ ವಿಷಯ ಚರ್ಚೆಗೆ ಬಂದಾಗ ಕೆಲ ಪ್ರಶ್ನೆಗಳನ್ನು ಎತ್ತುತ್ತೇನೆ. ಪ್ರತಿಪಕ್ಷದ ಬಹುತೇಕ ಸದಸ್ಯರು ಸ್ಪೀಕರ್ ಬಳಿ ಮಾತನಾಡುವ ಅವಕಾಶ ಕೇಳಲಿದ್ದಾರೆ ಎಂದು ಖಾನಪುರದ ಶಾಸಕ ಅಂಜಲಿ ನಿಂಬಾಳ್ಕರ್ ಹೇಳಿದ್ದಾರೆ. 

ಮಸೂದೆ ಬಗ್ಗೆ ಈಗಾಗಲೇ ಗಂಭೀರ ಆಕ್ಷೇಪ ಎತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ಪ್ರತಿಪಕ್ಷ ಮಸೂದೆ ವಿರುದ್ಧ ತೀವ್ರ ಹೋರಾಟ ನಡೆಸುವ ಸಾಧ್ಯತೆಯಿದೆ. ರಾಜಕೀಯ ಲಾಭಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುತ್ತಿದೆ. ಈಗಾಗಲೇ ಬಲವಂತದಿಂದ ಮತಾಂತರ ತಡೆಯಲು ಕಾನೂನು ಇರುವಾಗ ಇದರ ಅವಶ್ಯಕತೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

ದುರುದ್ದೇಶದಿಂದ ಜಾರಿಗೆ ತರಲಾಗುತ್ತಿರುವ ಮತಾಂತರ ನಿಷೇಧ ಕಾಯ್ದೆಯನ್ನು ತಮ್ಮ ಪಕ್ಷ ವಿರೋಧಿಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮಸೂದೆ ಅಂಗೀಕಾರಗೊಳ್ಳುವ ಮುನ್ನ ಕಾಂಗ್ರೆಸ್ ಸದಸ್ಯರು ಸದನವನ್ನು ಸಭಾತ್ಯಾಗ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಕೆರಳಿಸಿದೆ. 

ಮತ್ತೊಂದೆಡೆ ಆಡಳಿತರೂಢ ಬಿಜೆಪಿ ಸದಸ್ಯರು ಮಸೂದೆ ಸದನದಲ್ಲಿ ಅಂಗೀಕಾರಗೊಳ್ಳುವ ವಿಶ್ವಾಸದಲ್ಲಿದ್ದಾರೆ. ಅಕ್ರಮವಾಗಿ ಮತಾಂತರ ತಡೆಯಲು ಈ ಬಿಲ್ ಅಗತ್ಯವಾಗಿದೆ ಎಂದು ಪಕ್ಷ ಹೇಳುತ್ತಿದೆ. ಸದನದಲ್ಲಿ ಮತಾಂತರ ಮಸೂದೆ ಅಂಗೀಕಾರವಾದ ನಂತರ, ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com