ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಸ್ಥಾನ ಬದಲಿಸಿದ ಕಟೀಲ್!

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಪ್ರಮುಖ ವಕ್ತಾರ ಸೇರಿದಂತೆ 17 ಸ್ಥಾನಗಳಿಗೆ ಹೊಸ ನೇಮಕಾತಿಗಳನ್ನು ಮಾಡಿದ್ದು, ಈ ಮೂಲಕ ಹುಬ್ಬಳ್ಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಕೋರ್ ಕಮಿಟಿ ಸಭೆಗಳಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ.
Published on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಪ್ರಮುಖ ವಕ್ತಾರ ಸೇರಿದಂತೆ 17 ಸ್ಥಾನಗಳಿಗೆ ಹೊಸ ನೇಮಕಾತಿಗಳನ್ನು ಮಾಡಿದ್ದು, ಈ ಮೂಲಕ ಹುಬ್ಬಳ್ಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಕೋರ್ ಕಮಿಟಿ ಸಭೆಗಳಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ.

ಪಕ್ಷದ ಮುಖ್ಯ ವಕ್ತಾರರಾಗಿದ್ದ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್ ಅವರನ್ನು ಅನಿವಾಸಿ ಭಾರತೀಯ ವಿಭಾಗದ ಸಂಚಾಲಕರನ್ನಾಗಿ ನೇಮಿಸಿದ್ದು, ಮೈಸೂರಿನ ಎಂ.ಜಿ.ಮಹೇಶ್ ಅವರನ್ನು ರಾಜ್ಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ.

ಬಿಜೆಪಿಯ ಉಪಾಧ್ಯಕ್ಷರಾಗಿ ಮಾಜಿ ಸಚಿವ ಲಕ್ಷ್ಮಣ ಸವದಿ ಹಾಗೂ ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧ್ಯಕ್ಷರಾಗಿ ಮುರಹರಗೌಡ ಹಾಗೂ ಚನ್ನಬಸವನಗೌಡ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ವಿವಿಧ ಪ್ರಕೋಷ್ಠಗಳ ನೇಮಕಾತಿಗಳನ್ನೂ ಮಾಡಲಾಗಿದೆ.

ಎಚ್ ಯೋಗೇಂದ್ರ ಅವರನ್ನು ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ. ತುಮಕೂರು ಜಿಲ್ಲಾಧ್ಯಕ್ಷ ಸ್ಥಾನದಿಂದ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ಕೆಳಗಿಳಿಸಿರುವ ಕಟೀಲು ಅವರು, ಜಿಲ್ಲೆಯಲ್ಲಿ ಪಕ್ಷದ ಆಂತರಿಕ ಕಲಹಗಳು ಎದುರಾಗಿದ್ದರು, ಇಲ್ಲಿ ಯಾವುದೇ ನೇಮಕಾತಿ ಮಾಡದೇ ಇರುವುದು ಕುತೂಹಲ ಮೂಡಿಸಿದೆ.

ಈ ನಡುವೆ ಸೋಮವಾರ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯನ್ನು ಕೂಡ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com