ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 
Published on

ಹಾವೇರಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಹಾವೇರಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 

ಬಂಕಾಪುರ ಪುರಸಭೆಯಲ್ಲಿ ಒಟ್ಟು23  ಸ್ಥಾನಗಳಿದ್ದು, ಈ ಪೈಕಿ ಕಾಂಗ್ರೆಸ್ -14, ಬಿಜೆಪಿ -7, ಪಕ್ಷೇತರ -2 ಸ್ಥಾನ ಪಡೆದಿದೆ. ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್ ‌-11, ಬಿಜೆಪಿ -6, ಪಕ್ಷೇತರ -1 ಸ್ಥಾನ ಲಭಿಸಿದೆ.

ಎಂಎಲ್ಸಿ ಚುನಾವಣೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಇದು ಅಗ್ನಿಪರೀಕ್ಷೆಯಾಗಿತ್ತು. ನಗರ ಸಂಸ್ಥೆಗಳಾದ್ದರಿಂದ ಬಿಜೆಪಿಯ ಶಕ್ತಿ ಪರೀಕ್ಷೆಯೂ ಆಗಿದೆ.

5 ನಗರಸಭೆ, 19 ಪುರಸಭೆ ಮತ್ತು 34 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 58 ನಗರ ಸಂಸ್ಥೆಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 75ರಷ್ಟು ಮತದಾನವಾಗಿತ್ತು. ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಮತದಾನವಾಗಿದ್ದು ವರದಿಯಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com