ಕೇಂದ್ರ ಸಚಿವ ಸ್ಥಾನ ಬೇಡ ಎಂದು ಹೇಳಿದ್ದೇನೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ವಿ.ಶ್ರೀನಿವಾಸ್ ಪ್ರಸಾದ್
ವಿ.ಶ್ರೀನಿವಾಸ್ ಪ್ರಸಾದ್
Updated on

ಚಾಮರಾಜನಗೆರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಏಳು ಮಂದಿ ಲೋಕಸಭಾಸದಸ್ಯರಿದ್ದಾರೆ ಈ ಪೈಕಿ ಒಬ್ಬರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ. ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಅವರು ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭೆ ಚುನಾವಣೆ ನಡೆದು ಎರಡು ವರ್ಷ ತುಂಬಿದೆ. ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ಸಚಿವ ಸ್ಥಾನ ಖಾಲಿ ಇದೆ. ಹಾಲಿ ಪ್ರಹ್ಲಾದ್ ಜೋಶಿ ಹಾಗೂ ಸದಾನಂದಗೌಡರು ಕೇಂದ್ರ ಸಚಿವ ಸಂಪುಟದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಸ್ಥಾನ ತುಂಬುವ ಸಾಧ್ಯತೆ ಇದ್ದು, ಎಸ್ಸಿ-ಎಸ್ಟಿಗೆ ಒಂದು ಸ್ಥಾನ ಇತರರಿಗೆ ಇತರರಿಗೆ ಒಂದು ಸ್ಥಾನ ಲಭಿಸಲಿದೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಪಕ್ಷದಲ್ಲಿ ಈ ಕುರಿತು ಯಾವುದೇ ಗೊಂದಲಗಳಿಲ್ಲ. ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ನುಡಿದರು. ಚಾಮರಾಜ ನಗರ ಆಕ್ಸಿಜನ್ ದುರಂತದ ಪ್ರಕರಣದಲ್ಲಿ ಈಗಾಗಲೇ ಹೈಕೋರ್ಟ್ ಆದೇಶದಂತೆ ಮೊದಲ ಹಂತದಲ್ಲಿ ೨ ಲಕ್ಷ ರೂ. ಪರಿಹಾರವನ್ನು ೨೪ ಕುಟುಂಬಗಳಿಗೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಹಾಗೂ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಯುತ್ತಿದ್ದು, ಇದಕ್ಕೆ ಯಾರೂ ಸಹ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com