ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ: ಸಚಿವ ಮಾಧುಸ್ವಾಮಿ

ಕೋವಿಡ್‌–19 ಲಸಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯನರು ಭಾನುವಾರ ಹೇಳಿದ್ದಾರೆ.
ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
Updated on

ಉಡುಪಿ: ಕೋವಿಡ್‌–19 ಲಸಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯನರು ಭಾನುವಾರ ಹೇಳಿದ್ದಾರೆ.

ಭಾನುವಾರ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ. 80 ಕೋಟಿ ಜನರಿಗೆ ಉಚಿತ ಲಸಿಕೆ ಕೊಡುವುದು ಸುಲಭವಲ್ಲ. ಟೀಕೆ ಮಾಡಬೇಕು ಸರಿ, ಆದರೆ ಇದು ನೈಸರ್ಗಿಕ ವಿಪತ್ತು. ಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದು ಹೇಳಿದ್ದಾರೆ. 

ಕೋವಿಡ್ ಲಸಿಕೆಯನ್ನು ದಿಢೀರ್ ಉತ್ಪಾದನೆ ಮಾಡಲು ಆಗುವುದಿಲ್ಲ. ಅದಕ್ಕೂ ಸಮಯ ತೆಗೆದುಕೊಳ್ಳುತ್ತದೆ. ಆದರೆ ಕಾಂಗ್ರೆಸ್ ನವರು ವಿರೋಧ ಪಕ್ಷ ಇದೆ ಎಂದು ತೋರಿಸಲು ಟೀಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. 

ಇದೇ ವೇಳೆ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ ವಿಚಾರವಾಗಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರಿಗೆ ಪಕ್ಷದಿಂದ ತೊಂದರೆಯಾಗಿಲ್ಲ. ಅದೊಂದು ಆಕಸ್ಮಿಕವಾಗಿ ನಡೆದ ಘಟನೆ. ನೈತಿಕವಾಗಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿ ಶಿಕ್ಷೆ ಆಗಲಾರದು. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com