ರಾಜ್ಯದ 4 ಸಂಸದರು ಕೇಂದ್ರ ಸಚಿವರಾಗಬಹುದು: ವಿ.ಶ್ರೀನಿವಾಸ ಪ್ರಸಾದ್

ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ. 
ಶ್ರೀನಿವಾಸ ಪ್ರಸಾದ್
ಶ್ರೀನಿವಾಸ ಪ್ರಸಾದ್
Updated on

ಮೈಸೂರು: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ 2ನೇ ಬಾರಿ ಅಧಿಕಾರಕ್ಕೆ ಬಂದ 2 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ಅನಾರೋಗ್ಯದ ಕಾರಣ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾದವ್ ಹೆಸರು ಕೇಳಿ ಬರುತ್ತಿದೆ. ಜಾದವ್ ಗೆ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಗೆ ಸಚಿವ ಸ್ಥಾನ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com