ರಾಜ್ಯದ 4 ಸಂಸದರು ಕೇಂದ್ರ ಸಚಿವರಾಗಬಹುದು: ವಿ.ಶ್ರೀನಿವಾಸ ಪ್ರಸಾದ್

ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ. 
ಶ್ರೀನಿವಾಸ ಪ್ರಸಾದ್
ಶ್ರೀನಿವಾಸ ಪ್ರಸಾದ್

ಮೈಸೂರು: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ 2ನೇ ಬಾರಿ ಅಧಿಕಾರಕ್ಕೆ ಬಂದ 2 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ಅನಾರೋಗ್ಯದ ಕಾರಣ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾದವ್ ಹೆಸರು ಕೇಳಿ ಬರುತ್ತಿದೆ. ಜಾದವ್ ಗೆ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ ಗೆ ಸಚಿವ ಸ್ಥಾನ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com