ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ!

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ
Updated on

ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಾನು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆ, ಮಾಡುತ್ತಿರುವ ಕೆಲಸಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇನೆ. ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ಇಲ್ಲಿಗೆ ಬರುತ್ತೇನೆ, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವುದು ಶುದ್ಧ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿಯಿಂದಲೇ ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.

ಮೇಕೆದಾಟು ಯೋಜನೆ ಮಾಡಿಯೇ ಸಿದ್ದ: ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಯೋಜನೆ ಕರ್ನಾಟಕ ಮತ್ತು ತಮಿಳು ನಾಡು ಅಣ್ಣತಮ್ಮಂದಿರಂತೆ ಇರಲು ಒಂದು ಉತ್ತಮ ಅವಕಾಶ, ಆದ್ದರಿಂದ ಮೇಕೆದಾಟು ಯೋಜನೆಗೆ ಅಗತ್ಯ ಅನುಮತಿಯನ್ನು ಪಡೆದುಕೊಳ್ಳುತ್ತೇನೆ. ಇದರಿಂದ ಪಕ್ಕದ ರಾಜ್ಯಗಳಿಗೆ ತೊಂದರೆ ಇಲ್ಲದಿರುವುದರಿಂದ ಮೇಕೆದಾಟು ಯೋಜನೆಗೆ ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾವುದೇ ರೀತಿಯ ಗೊಂದಲಗಳಿಲ್ಲ ಎಂದರು.

ಇಂದು ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಕೂಡ ಭೇಟಿ ಮಾಡಿ ಬೆಂಗಳೂರಿಗೆ ಹಿಂತಿರುಗುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com