ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ಜೆಡಿಎಸ್ ಸಿಡಿದೆದ್ದು ಬರಲಿದೆ: ಮಾಜಿ ಸಿಎಂ ಕುಮಾರಸ್ವಾಮಿ

ಇಂದು ಹೊರಹೊಮ್ಮಿದ ಕರ್ನಾಟಕ ವಿಧಾನಸಭೆ, ಲೋಕಸಭೆ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ "ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರ
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ
Updated on

ಬೆಂಗಳೂರು: ಇಂದು ಹೊರಹೊಮ್ಮಿದ ಕರ್ನಾಟಕ ವಿಧಾನಸಭೆ, ಲೋಕಸಭೆ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ "ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ." ಎಂದಿದ್ದಾರೆ.

ಸರಣಿ ಟ್ವೀಟ್ ಮೂಲಕ ಜೆಡಿಎಸ್ ಕಾರ್ಯಕರ್ತರಿಗೆ, ಜೆಡಿಎಸ್ ಗೆ ಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿರುವ ಕುಮಾರಸ್ವಾಮಿ "ಬಸವಕಲ್ಯಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ." ಎಂದಿದ್ದಾರೆ.

"ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ.

"ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲು ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ.

"ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ.

"ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ  ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ." ಎಂದು ಕುಮಾರಸ್ವಾಮಿ ಹೇಳಿದ್ದಾರೆ.

"ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ." ಎಂದೂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com