ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್

ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ನಿತ್ಯವೂ ಅಪಾರ ಸಾವು-ನೋವು ಉಂಟಾಗುತ್ತಿದೆ, ಜನರು ಬಹಳ ಸಂಕಷ್ಟದಲ್ಲಿದ್ದಾರೆ, ಹೀಗಿರುವಾಗ ಇದು ಸಂಭ್ರಮಪಡುವ ಸಮಯವಲ್ಲ, ಗುಂಪು ಸೇರಿ, ಪಟಾಕಿ ಹಚ್ಚಿ ಸಿಹಿ ತಿಂದು ಸಂಭ್ರಮಾಚರಣೆ ಮಾಡಬೇಡಿ, ಚುನಾವಣಾ ಆಯೋಗ ಕೂಡ ಸ್ಪಷ್ಟವಾಗಿ ಸಂಭ್ರಮಾಚರಣೆ ಮಾಡಬಾರದೆಂದು ಹೇಳಿದೆ, ಯಾರೂ ನಿಯಮ ಉಲ್ಲಂಘಿಸಬೇಡಿ ಎಂದು ಮನವಿ ಮಾಡಿಕೊಂಡರು.

ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸದಲ್ಲಿದ್ದೇವೆ, ಈ ಚುನಾವಣಾ ಫಲಿತಾಂಶ ಎಲ್ಲ ಪಕ್ಷಕ್ಕೂ ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಎಂದು ಡಿ ಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com