ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಿ: ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಗುರುವಾರ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on

ಉಡುಪಿ: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಗುರುವಾರ ಹೇಳಿದ್ದಾರೆ.

ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡುವುದು ಉತ್ತಮ. ಜನ ಈಗಿನಂತೆ ಓಡಾಡಿದರೆ ಕೊರೋನಾ ತಡೆಯಲು ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ಸೋಂಕು ಹೆಚ್ಚು ಹರಡುತ್ತಿದೆ ಎಂದರು.

ಮುಂಬೈ ಹಾಗೂ ಬೆಂಗಳೂರಿನಿಂದಲೂ ಜನ ಉಡುಪಿ ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಕೊರೋನಾ ಪರೀಕ್ಷೆ  ಮಾಡಿಸಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಕೊರೋನಾ ಕರ್ಫ್ಯೂ ಸಂಪೂರ್ಣ ವಿಫಲವಾಗಿದ್ದು,  ಸಂಪೂರ್ಣ ಲಾಕ್ ಡೌನ್ ಮಾಡುವುದು ಉತ್ತಮ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com