ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ

“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.
ಎಂಪಿ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Updated on

ದಾವಣಗೆರೆ: “ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಆಡಳಿತಾರೂಢ ಬಿಜೆಪಿ ಸದಸ್ಯರಾದ ನಿಮ್ಮ ವಿರುದ್ಧ ಆರೋಪ ಹೊರಿಸುತ್ತಿರುವುದು ನನಗೆ ಬೇಸರ ತಂದಿದೆ ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

ಕೋವಿಡ್ -19 ಎರಡನೇ ಅಲೆಯ ನಡುವೆ  ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸಿದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಪ್ರತಿಪಕ್ಷಗಳಿಗೆ ಸಚಿವರ ವೈಫಲ್ಯ ಆಹಾರ ಒದಗಿಸಿದೆ ಎಂದು ಹೊನ್ನಾಳಿ ಶಾಸಕ ಹೇಳಿದ್ದಾರೆ. ರಾಜ್ಯವು ಇಷ್ಟು ದೊಡ್ಡ ಪ್ರಮಾಣದ ಸಮಸ್ಯೆ ಎದುರಿಸುತ್ತಿರುವಾಗ ಸುಧಾಕರ್ ಎರಡು ಖಾತೆಗಳನ್ನು ನಿರ್ವಹಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು. ಕೋವಿಡ್ -19 ರ ಬಿಕ್ಕಟ್ಟು. ಬೆಡ್ ಬ್ಲಾಕಿಂಗ್ ಹಗರಣ ಮತ್ತು ಚಾಮರಾಜ್‌ನಗರ ಘಟನೆಗೆ ಸುಧಾಕರ್ ಸಂಪೂರ್ಣ ಹೊಣೆ ಎಂದು ಆರೋಪಿಸಿದ ಅವರು ಸಚಿವರ ರಾಜೀನಾಮೆ ಕೋರಿದ್ದಾರೆ.

“ಬಿಜೆಪಿ ನಿಮ್ಮನ್ನು ಅವಲಂಬಿಸಿಲ್ಲ. ನಿಮ್ಮಿಂದಾಗಿ ಸರ್ಕಾರವೂ ಕಾರ್ಯನಿರ್ವಹಿಸುತ್ತಿಲ್ಲ. ನೀವು ಅಸಮರ್ಥರಾಗಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ. ಜನರ ಕಲ್ಯಾಣಕ್ಕಾಗಿ ದುಡಿಯುವ ಪಕ್ಷ ಅಥವಾ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರಲು ಪ್ರಯತ್ನಿಸಬೇಡಿ ”ಎಂದು ರೇಣುಕಾಚಾರ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com