ಯಡಿಯೂರಪ್ಪ
ಯಡಿಯೂರಪ್ಪ

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಸಚಿವರಾದ ಅರವಿಂದ ಲಿಂಬಾವಳಿ, ಪ್ರಭು ಚವ್ಹಾಣ ಹಾಗೂ ಆರ್. ಶಂಕರ್ ಅವರಿಗೆ ಈ ಕೆಳಗಿನಂತೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. 

ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಬೀದರ್ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ. ಹಾಗೆಯೇ ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಅವರಿಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com