ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಆರೋಪಿ ಒಪ್ಪಿಕೊಂಡಿದ್ದಾಯ್ತು, ಮಾಜಿ ಸಚಿವರ ಬಂಧನ ಯಾವಾಗ? ಕಾಂಗ್ರೆಸ್

ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಆರೋಪಿ ಸಿಡಿಯಲ್ಲಿರುವ ವ್ಯಕ್ತಿ ತಾನೇ ಎಂದು ಒಪ್ಪಿಕೊಂಡಿದ್ದಾಯ್ತು, ಇದೀಗ ಮಾಜಿ ಸಚಿವರ ಬಂಧನ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
Updated on

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ಆರೋಪಿ ಸಿಡಿಯಲ್ಲಿರುವ ವ್ಯಕ್ತಿ ತಾನೇ ಎಂದು ಒಪ್ಪಿಕೊಂಡಿದ್ದಾಯ್ತು, ಇದೀಗ ಮಾಜಿ ಸಚಿವರ ಬಂಧನ ಯಾವಾಗ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಲೈಂಗಿಕ ಕ್ರಿಯೆ ನಡೆಸುತ್ತಿರುವ ದೃಶ್ಯಾವಳಿಗಳನ್ನು ಹೊಂದಿರುವ ಸಿ.ಡಿಯಲ್ಲಿ ಇರುವ ವ್ಯಕ್ತಿ ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದು ಅವರ ಬಂಧನ ಯಾವಾಗ ಎಂದು ಪ್ರಶ್ನಿಸಿದೆ.

'ನಾನವನಲ್ಲ' ಎಂದವರು ಈಗ 'ನಾನೇ ಅವನು' ಎನ್ನುತ್ತಿದ್ದಾರೆ! ರಮೇಶ್ ಜಾರಕಿಹೊಳಿ ಅವರೇ ಸಿಡಿ ಅಸಲಿ, ಅದು ತಾವೇ ಎಂದಮೇಲೆ ಮೊದಲು ನಿರಾಕರಿಸಿದ್ದೇಕೆ ಎಸ್ ಐಟಿ ರಚನೆ ಮಾಡಿಸಿದ್ದೇಕೆ ಜನರ ಹಣ ಪೋಲು ಮಾಡಿಸಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಅಲ್ಲದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ಆರೋಪಿ ಒಪ್ಪಿಕೊಂಡಿದ್ದಾಯ್ತು, ಇನ್ನಾದರೂ ಸಂತ್ರಸ್ತೆಯ ದೂರಿನ ಮೆರೆಗೆ ಬಂಧಿಸಿ ಕಾನೂನು ಪಾಲಿಸುವಿರಾ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com