ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಮಹಂತೇಶ್ ಕಾವಟಗಿಮಠ ಅವರು ಗೆದ್ದೇ ಗೆಲ್ಲುತ್ತಾರೆ. ಲಖನ್ ಅವರು ನಮ್ಮ ಪಕ್ಷದಲ್ಲಿ ಇಲ್ಲ, ಹೀಗಾಗಿ ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲಿನ ಬೆಳವಣಿಗೆ ಬಗ್ಗೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಜೊತೆ ಮಾತನಾಡಿ ತಿಳಿದುಕೊಳ್ಳುತ್ತಿದ್ದೇನೆ. ರಮೇಶ್ ಜಾರಕಿಹೊಳಿಯವರು, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದೇ ತಮ್ಮ ಗುರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ನಮ್ಮ ಅಭ್ಯರ್ಥಿಗೇನು ತೊಂದರೆಯಾಗುವುದಿಲ್ಲ ಎಂದಿದ್ದಾರೆ.

ಅಲ್ಲಿರುವ ವಸ್ತುಸ್ಥಿತಿ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ, ಬಾಲಚಂದ್ರ ಮತ್ತು ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com