ಬಿಜೆಪಿ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೇ ದೇವದಾಸಿ, ಅಸ್ಪೃಶ್ಯತೆಯನ್ನು ಪುರಸ್ಕರಿಸಲಿದೆಯೇ?

ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಬಿಜೆಪಿ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೇ, ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ 'ಭಾವನೆ'ಗಳನ್ನು ಪುರಸ್ಕರಿಸಲಾಗುತ್ತದೆಯೇ?' ಎಂದು ಪ್ರಶ್ನಿಸಿದೆ.

ಅನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳಿಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರ ಕುಮ್ಮಕ್ಕಿನ ಹೇಳಿಕೆಯಿಂದ ಸಮಾಜಘಾತುಕ ಶಕ್ತಿಗಳಿಗೆ ಬಲ ಬಂದಿದೆ' ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. 

'ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸಗಳು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂದು ನಿಶ್ಚಿತವಾಯ್ತು' ಎಂದು ಕೆಪಿಸಿಸಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com