ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ.
ಡಿಕೆ ಶಿವಕುಮಾರ್, ಎಚ್. ಸಿ. ಬಾಲಕೃಷ್ಣ
ಡಿಕೆ ಶಿವಕುಮಾರ್, ಎಚ್. ಸಿ. ಬಾಲಕೃಷ್ಣ

ರಾಮನಗರ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಪರಮೇಶ್ವರ್ ಹೀಗೆ ಸಾಲು,ಸಾಲು ನಾಯಕರನ್ನು ಹೆಸರು ಹೇಳಿಕೊಂಡು ಒಳಒಳಗೆ ಖುಷಿ ಪಡುತ್ತಿದ್ದಾರೆ. ಈಗ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಬಾಂಬ್ ಹಾಕಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2018 ರ ಚುನಾವಣೆಯಲ್ಲಿ ನಮ್ಮ ಜಿಲ್ಲೆಯ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿದ್ದಾಯ್ತು, ಕುಮಾರಸ್ವಾಮಿ ಸರದಿ ಮುಗಿದಿದೆ, ಮುಂದಿನದು ಡಿ.ಕೆ. ಶಿವಕುಮಾರ್ ಸರದಿ ಎಂದರು.

ಈ ಬಾರಿ ನಮ್ಮ ಜಿಲ್ಲೆಯ ನಾಯಕನಿಗೆ ಮುಖ್ಯಮಂತ್ರಿಯಾಗುವ ಅವಕಾಶ ಹೆಚ್ಚಾಗಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಜಿಲ್ಲೆಯ ಜನತೆ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com