ಮುಗಿದ ಉಪಚುನಾವಣೆ ಪ್ರಚಾರ: ಸಿಎಂ ಬಸವರಾಜ ಬೊಮ್ಮಾಯಿ ಹೆಗಲಿಗೆ ಬಿಬಿಎಂಪಿ ಅಗ್ನಿ ಪರೀಕ್ಷೆ!

ಅಕ್ಟೋಬರ್ 30 ರಂದು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಅಕ್ಟೋಬರ್ 30 ರಂದು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇನ್ನೂ ಕೆಲವೇ ದಿನಗಳಲ್ಲಿ ಮತ್ತೊಂದು ಚುನಾವಣೆ ಜವಾಬ್ದಾರಿ ಸಿಗಲಿದೆ,  ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿದೆ.

ಬಿಬಿಎಂಪಿ ಚುನಾವಣೆಗೆ ಕಳೆದ ತಿಂಗಳು ಸಲ್ಲಿಸಲಾಗಿದ್ದ ತಡೆಯಾಜ್ಞೆಯ ವಿರುದ್ಧ ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ಅರ್ಜಿಯನ್ನು ಅಂಗೀಕರಿಸಲಾಗಿದ್ದು, ಅದರ ವಿಚಾರಣೆಯು ಈ ತಿಂಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಪಾಲಿಕೆ ಸಭಾಂಗಣದಲ್ಲಿ ಆಸನ ವ್ಯವಸ್ಥೆ ಬದಲಾಯಿಸುವ ಮೂಲಕ ಬೃಹತ್ ಬಿಬಿಎಂಪಿ ಕೌನ್ಸಿಲ್‌ಗೆ ಸಜ್ಜಾಗುತ್ತಿದೆ. ಇದಕ್ಕಾಗಿ 10 ಕೋಟಿ ರೂ.  ಖರ್ಚು ಮಾಡುತ್ತಿದೆ. ಕೌನ್ಸಿಲ್ ಹಾಲ್‌ನಲ್ಲಿ ಒಟ್ಟು ಆಸನ ಸಾಮರ್ಥ್ಯವನ್ನು ಈಗಿರುವ 198 ರಿಂದ ಹೆಚ್ಚಿಸಲಾಗುವುದು.

ಬಿಜೆಪಿ ಸೇರಿದಂತೆ ಬೆಂಗಳೂರಿನ ಅನೇಕ ಶಾಸಕರು ಸಹ ಬಿಬಿಎಂಪಿ ಚುನಾವಣೆಗೆ ಹೋಗುವುದರ ಪರವಾಗಿದ್ದಾರೆ.   ಡಿಸೆಂಬರ್ 2020 ರಲ್ಲಿ, ಕರ್ನಾಟಕ ಹೈಕೋರ್ಟ್ ಆರು ವಾರಗಳಲ್ಲಿ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು, ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ 243 ವಾರ್ಡ್‌ಗಳನ್ನು ಕಲ್ಪಿಸುವ ಹೊಸ ಬಿಬಿಎಂಪಿ ಕಾಯ್ದೆಯನ್ನು ಒತ್ತಿ ಅರ್ಜಿ ಸಲ್ಲಿಸಿದರು. ಎಸ್‌ಇಸಿ ತನ್ನ ಆಕ್ಷೇಪಣೆ ಸಲ್ಲಿಸಿತ್ತು. ಏತನ್ಮಧ್ಯೆ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಎಸ್‌ಇಸಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿತು. 

ಪೌರ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಬಗ್ಗೆ ಮಾತನಾಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು, ನಮ್ಮ ಅರ್ಜಿಯನ್ನು ಸ್ವೀಕರಿಸಲಾಗಿದೆ ಮತ್ತು ಮುಂದಿನ ವಿಚಾರಣೆಯು ಈ ತಿಂಗಳ ಕೊನೆಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಕೌನ್ಸಿಲ್ ಸ್ಥಾನಗಳನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ನಮ್ಮ ಎಂಜಿನಿಯರ್‌ಗಳು ಕೆಲಸ ಮಾಡುತ್ತಿದ್ದಾರೆ, ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ, ಆದರೆ ಅವರು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಿಲ್ಲ. ಇದಲ್ಲದೆ, ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರಿನಲ್ಲಿ ಮತದಾರರ ಪಟ್ಟಿಗಳ ಸಾರಾಂಶ ಪರಿಷ್ಕರಣೆಯನ್ನು ಪ್ರಾರಂಭಿಸಿದ್ದಾರೆ. 2022ರ ಜನವರಿಯೊಳಗೆ ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಹೊರಬೀಳಲಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಜೆಪಿ ಶಾಸಕ ಎಸ್.ರಘು ನೇತೃತ್ವದ ಬಿಬಿಎಂಪಿ ಜಂಟಿ ಆಯ್ಕೆ ಸಮಿತಿಯು 243 ವಾರ್ಡ್‌ಗಳ ಪರವಾಗಿ ಶಿಫಾರಸುಗಳನ್ನು ಸಲ್ಲಿಸಿತ್ತು. “ನಾವು 243 ವಾರ್ಡ್‌ಗಳಿಗೆ ಡಿಲಿಮಿನೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಮುಂದಿನ ಕೆಲವು ದಿನಗಳಲ್ಲಿ ಕರಡು ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಗೌರವ್ ಗುಪ್ತಾ ಹೇಳಿದರು. ಪಕ್ಷದ ಕೆಲವು ಶಾಸಕರು ಬಿಬಿಎಂಪಿ ಚುನಾವಣೆ ನಡೆಸಲು ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com