ಕಾಂಗ್ರೆಸ್ ಪ್ರತಿಭಟನೆಗೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಮಂಡಲ ಕಲಾಪ ಆರಂಭದ ಹೊತ್ತಲ್ಲೇ ಪ್ರತಿಭಟನೆಯ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಎತ್ತಿನಗಾಡಿ ಚಲೋ ಹಮ್ಮಿಕೊಂಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ವಿಧಾನಮಂಡಲ ಕಲಾಪ ಆರಂಭದ ಹೊತ್ತಲ್ಲೇ ಪ್ರತಿಭಟನೆಯ ಬಿಸಿ ತಟ್ಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಎತ್ತಿನಗಾಡಿ ಚಲೋ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಇಂದು ವಿಧಾಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಯುಪಿಎ ಸರ್ಕಾರ ಅವಧಿಯಲ್ಲಿ ಡಾ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಬೆಲೆ ಏರಿಕೆಯಾಗಿದ್ದು. ಆಗ ಪ್ರತಿಭಟನೆ ಮಾಡುತ್ತಿದ್ದರು ಇದಕ್ಕೆ ಅರ್ಥವಿರುತ್ತಿತ್ತು ಎಂದಿದ್ದಾರೆ.

ಸದನದಲ್ಲಿ ಕಲಾಪ ವೇಳೆ ಕಾಂಗ್ರೆಸ್ ನಾಯಕರು ಇದನ್ನು ಪ್ರಸ್ತಾಪಿಸುತ್ತಾರೆ ಎಂದು ನನಗೆ ಚೆನ್ನಾಗಿ ಗೊತ್ತಿದೆ. ಅವರಿಗೆ ಸದನದಲ್ಲಿಯೇ ತಕ್ಕ ಉತ್ತರ ನೀಡುತ್ತೇನೆ ಎಂದರು. ಸದ್ಯ ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಚಲೋ ವಿಧಾನಸೌಧಕ್ಕೆ ತಲುಪಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಕಲಾಪ ಆರಂಭವಾಗಲಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com