ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿವಂಗತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರು ಭಾರೀ ಮತಗಳ ಅಂತರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆಂದು ಹೇಳಿದ್ದಾರ.
ಈ ಹಿಂದಿನ ಚುನಾವಣೆಯಲ್ಲಿ ಮಾಜಿ ಸಚಿವರು 4 ಲಕ್ಷಗಳ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅವರ ಪತ್ನಿ ಕೂಡ ಅದೇ ರೀತಿಯಲ್ಲಿಯೇ ಗೆಲುವು ಸಾಧಿಸಲಿದ್ದಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಸಾರಿಗೆ ಮುಷ್ಕರ ಕುರಿತು ಮಾತನಾಡಿದ ಅವರು, ನಾನೇಕೆ ಪ್ರತಿಭಟಿಸುತ್ತಿರುವ ನೌಕರರೊಂದಿಗೆ ಮಾತುಕತೆ ನಡೆಸಲಿ? ಅವರ 8 ಆಗ್ರಹಗಳನ್ನು ಸರ್ಕಾರ ಈಡೇರಿಸಿದೆ. ಕೂಡಲೇ ಮುಷ್ಕರ ಕೈಬಿಟ್ಟು ನೌಕರರು ಕರ್ತವ್ಯಕ್ಕೆ ಹಾಜರಾಬೇಕೆಂದು ಹೇಳಿದ್ದಾರೆ.
ಇದೀಗ ನಾವು ಬೆಂಗಳೂರಿಗೆ ತೆರಳುತ್ತಿದ್ದು, ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಮಾತುಕತೆ ಬಳಿಕವೂ ಮುಷ್ಕರ ಹಿಂಪಡೆಯದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Advertisement