ಅರುಣ್ ಸಿಂಗ್ ಸಮ್ಮುಖದಲ್ಲಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮರಳಿ ಬಿಜೆಪಿಗೆ ಸೇರ್ಪಡೆ!

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಗೊಂಡಿದ್ದಾರೆ.
ಪ್ರಕಾಶ್ ಖಂಡ್ರೆ
ಪ್ರಕಾಶ್ ಖಂಡ್ರೆ

ಬೀದರ್: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾಲ್ಕಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಗೊಂಡಿದ್ದಾರೆ. 

ಬಸವಕಲ್ಯಾಣದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಕಾಶ್ ಖಂಡ್ರೆ ಅವರು ಕಮಲ ಪಾಳಯಕ್ಕೆ ಸೇರ್ಪಡೆಯಾದರು. 2018ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. 

1999ರಿಂದ 2018ರವರೆಗೂ ಬಿಜೆಪಿಯಲ್ಲಿ ಸಕ್ರೀಯರಾಗಿದ್ದ ಖಂಡ್ರೆ ಅವರು 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com