ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡ ಬೆಂಗಳೂರಿನ ಬಿಜೆಪಿಯ ಹಿರಿಯ ಶಾಸಕರು!

ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  
ಆರ್. ಅಶೋಕ್, ವಿ. ಸೋಮಣ್ಣ
ಆರ್. ಅಶೋಕ್, ವಿ. ಸೋಮಣ್ಣ

ಬೆಂಗಳೂರು: ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ.ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ  ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  

ಮೊಬೈಲ್ ನಲ್ಲಿ ಸಂಭಾಷಣೆ ವೇಳೆ ಪರಸ್ಪರ ಏಕವಚನ ಮತ್ತು ಕೆಟ್ಟ ಪದಗಳನ್ನು ಬಳಸಿ ಜಗಳವಾಡಿಕೊಂಡಿದ್ದಾರೆ. ಆಡಿಯೋ ತುಣುಕು ಕೆಲವರಿಗೆ ಲಭ್ಯವಾಗಿದ್ದು, ಪಕ್ಷದೊಳಗೆ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 

ತಮ್ಮನ್ನು ಕರೆಯದೇ ದೆಹಲಿಗೆ ಹೋಗಿದ್ದ ಅಶೋಕ್, ಸಂಪುಟಕ್ಕೆ ತಮ್ಮನ್ನು ಸೇರಿಸದಂತೆ ವರಿಷ್ಠರಿಗೆ ದೂರು ನೀಡಿರಬಹುದೆಂದು ಸೋಮಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ. ಆಗ ಇಬ್ಬರೂ ಪರಸ್ಪರ ಪಿತೂರಿ, ಸೇಡಿನ ರಾಜಕಾರಣದ ಆರೋಪ ಮಾಡಿದ್ದು, ಕೆಲ ನಿಮಿಷಗಳ ಕಾಲ ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ. ಯಾವುದೋ ಕಾಲದಲ್ಲಿ ನಡೆದ ಚರ್ಚೆಯನ್ನೆ ಇದೀಗ ಸಂಪುಟ ವಿಚಾರಕ್ಕೆ ತಳುಕು ಹಾಕಲಾಗುತ್ತಿದೆ. ಅಶೋಕ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ  ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com